||ವಕ್ರತುಂಡ ಮಹಾಕಾಯ ಕೋಟಿಸೂರ್ಯ ಸಮಪ್ರಭ ನಿರ್ವಿಘ್ನಂ ಕುರು ಮೇ ದೇವ ಸರ್ವಕಾರ್ಯೇಷು ಸರ್ವದಾ ||
ಪರಶುರಾಮ ಸ್ರಷ್ಟಿಯ ಸಪ್ತಕ್ಷೇತ್ರಗಳಲ್ಲಿ ಕುಂಭಾಸಿಯೂ ಒಂದಾಗಿದೆ. ಇದನ್ನು ಕ್ರತಯುಗದಲ್ಲಿ ಹರಿಹರ ಕ್ಷೇತ್ರವೆಂದೂ, ತ್ರೇತಾಯುಗದಲ್ಲಿ ಮಧುಕಾನನವೆಂದೂ, ದ್ವಾಪರಯುಗದಲ್ಲಿ ಗೌತಮ ಕ್ಷೇತ್ರವೆಂದೂ,ಕಲಿಯುಗದಲ್ಲಿ ಕುಂಭಾಸಿಯೆಂದು ಕರೆಯುತ್ತಾರೆ. ಈ ಕ್ಷೇತ್ರವು ಅನಾವೃಷ್ಟಿಯಿಂದ ಪೀಡಿತವಾದಾಗ ಗೌತಮ ಮುನಿಗಳು ಇಲ್ಲಿ ನೆಲೆಸಿ ಯಜ್ನ ಯಾಗಾದಿಗಳನ್ನು ನಡೆಸಿದರು. ಹೀಗೆ ಈ ಕ್ಷೇತ್ರವು ಯುಗಾಂತರಗಳಿಂದಲೂ ಪವಿತ್ರವಾದುದು ಎಂದು ಪುರಾಣಗಳು ಸಾರುತ್ತವೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಡುಪಿ – ಕುಂದಾಪುರದ ನಡುವೆ ಹೆದ್ದಾರಿಯಿಂದ ಒಂದು ಕಿ.ಮೀ. ಪೂರ್ವಕ್ಕೆ ಕುಂಭಾಸಿ ಕ್ಷೇತ್ರದಲ್ಲಿ ಆನೆಗುಡ್ದೆ ಇದೆ. ಕುಂಭಾಸಿಯು ಸಪ್ತಕ್ಷೇತ್ರಗಳಲ್ಲಿ ಒಂದಾಗಿದ್ದು ಇಲ್ಲಿಯ ಆನೆಗುಡ್ದೆ ಶ್ರೀ ವಿನಾಯಕ ದೇವಸ್ಥಾನವು ಅತೀ ಪುರಾತನವಾಗಿದ್ದು ಇಲ್ಲಿಗೆ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ನಿತ್ಯವೂ ಯಾತ್ರಾರ್ಥಿಗಳಾಗಿ ಬಂದು ಶ್ರೀ ದೇವರ ದರ್ಶನ ಪಡೆದು ಸೇವೆಯನ್ನು ಮಾಡಿಸಿಕೊಂಡು ಇಷ್ಟಾರ್ಥವನ್ನು ಪಡೆದು ಕೃತಾರ್ಥಾರಾಗುತ್ತಾರೆ.
| Destination | Distance |
|---|---|
| Mangalore Airport | 88 km |
| Kundapura Railway Station | 10 km |
| From Udupi | 30.9 km |
| From Kundapura | 6.9 km |
Watch the events at Anegudde Vinayaka Temple Kumbashi